Advertisement

ಬೆಳೆವಿಮೆಗೆ ಒತ್ತಾಯಿಸಿ ಮನವಿ

06:11 PM Oct 06, 2019 | Team Udayavani |

ಕೊಪ್ಪಳ: ಜಿಲ್ಲೆಯಲ್ಲಿ 2017-18ನೇ ಸಾಲಿನ ಹಾಗೂ 2018-19ನೇ ಸಾಲಿನ ಬೆಳೆವಿಮೆ ಮಂಜೂರು ಮಾಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಎಸಿ ಸಿ.ಡಿ. ಗೀತಾ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಐತರಿಗೆ 2017-18, 2018-19ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯ ಬೆಳೆವಿಮೆ ಹಣ ಬ್ಯಾಂಕಿಗೆ ಭರಿಸಲಾಗಿದೆ. ಆದರೆ ಇಲ್ಲಿವರೆಗೂ ರೈತರ ಖಾತೆಗೆ ವಿಮೆ ಮೊತ್ತ ಪಾವತಿ ಮಾಡಿಲ್ಲ. ರೈತರು ವಿಮೆ ಬಾರದೇ ಇದ್ದಿದ್ದಕ್ಕೆ ಸಂಕಷ್ಟ ಎದುರಿಸುತ್ತಿದ್ದಾರೆ.

Advertisement

ಈ ವರ್ಷವೂ ಮುಂಗಾರು ಮಳೆ ಕೈ ಕೊಟ್ಟಿದೆ. ಸರ್ಕಾರ ಕೂಡಲೇ ಬೆಳೆವಿಮೆ ಪಾವತಿ ಮಾಡಬೇಕು. ಇಲ್ಲದಿದ್ದರೆ ಬೆಳೆವಿಮೆ ಪಾವತಿಗೆ ಅ. 10ರಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಮನವಿ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next