Advertisement

ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ಸಹಾಯಧನಕ್ಕೆ ಮನವಿ

02:07 PM Jul 02, 2020 | mahesh |

ರಾಣಿಬೆನ್ನೂರ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ನೂರಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಅವರಿಗೆ ಸಹಾಯಧನ ಪ್ಯಾಕೇಜ್‌ ಘೋಷಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಶಾಶ್ವತ ಅನುದಾನ ರಹಿತ ಆಡಳಿತ ಮಂಡಳಿಗಳ ಸಂಘದ ಸಂಚಾಲಕ ಯು.ಎಂ. ಗುರುಲಿಂಗಪ್ಪಗೌಡ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Advertisement

ಈ ಕುರಿತಂತೆ ಮೇ 20ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಖಾಸಗಿ ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂ ದಿಗಳ ಮೇಲೆ ಕೃಪೆ ತೋರದ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಖಾಸಗಿ ಶಾಲಾ ಶಿಕ್ಷಕರು ಇದೀಗ ಬದುಕಿನ ದಾರಿ ಕಾಣದೇ ತಮ್ಮ ಶಿಕ್ಷಣ ವೃತ್ತಿಯ ಘನತೆ ಗೌರವ ಮರೆತು ಬೀದಿಬದಿಯಲ್ಲಿ ಇಡ್ಲಿ, ವಡೆ, ಚಹಾ, ತರಕಾರಿ ಮತ್ತಿತರೆ ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಂಡು ತಾತ್ಕಾಲಿಕವಾಗಿ ಜೀವನ ಸಾಗಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ಶಿಕ್ಷಕರ ವೃತ್ತಿ ಸಮಾಜದಲ್ಲಿ ಅತ್ಯುನ್ನತ ಶ್ರೇಷ್ಠ ವೃತ್ತಿಯಾಗಿದೆ. ದೇಶದ ಭವಿಷ್ಯ, ಅಭಿವೃದ್ಧಿ ಹಾಗೂ ದೇಶದ ಸಂಸ್ಕೃತಿ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವ ವೃತ್ತಿ ಇದಾಗಿದೆ. ಆದರೆ ಪರಿಸ್ಥಿತಿ ತುಂಬಾ ಹದಗೆಡುತ್ತಲಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗುತ್ತಿರುವ ಘಟನೆಗಳು ಸಹ ಅಲ್ಲಲ್ಲಿ ನಡೆಯುತ್ತಲಿವೆ. ಕೊರೋನಾ ಮಹಾಮಾರಿ ಸಂಬಂಧ ಕೇಂದ್ರ  ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಿಸಿ ಜನಪರ ಕಾರ್ಯನಿರ್ವಹಿಸಿದೆ.  ರಾಜ್ಯದಲ್ಲಿ 2,500 ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2.50 ಲಕ್ಷಕ್ಕೂ ಅಧಿಕ ಶಿಕ್ಷಕರು ತಮ್ಮ ವೃತ್ತಿಯಲ್ಲಿದ್ದಾರೆ. ಅವರಿಗೆ ಕನಿಷ್ಠ ಬದುಕು ಸಾಗಿಸಲು ಕೂಡಲೇ ಸಹಾಯಧನ ಬಿಡುಗಡೆ ಮಾಡಿ ಮಾನವೀಯತೆ ಮೆರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next