Advertisement

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

08:59 PM Mar 28, 2024 | Suhan S |

ಬೆಂಗಳೂರು: ರಾಜ್ಯದಲ್ಲಿ ಕ್ಷಯ ರೋಗ ನಿಯಂತ್ರಣಕ್ಕೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿ ಕೊರತೆ ಎದುರಾಗಿದ್ದು, ಔಷಧಗಳನ್ನು ತತ್‌ಕ್ಷಣ ಪೂರೈಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಕೇಂದ್ರ ಆರೋಗ್ಯ ಸಚಿವ ಮನ್‌ಸೂಖ್‌ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ.

Advertisement

2021ರಿಂದ ರೋಗಿಗಳಿಗೆ ಪೂರೈಸುವ ಔಷಧದಲ್ಲಿ ಅಡಚಣೆ ಉಂಟಾಗುತ್ತಿದೆ. ಮುಂದಿನ ಮೂರು ತಿಂಗಳಿಗೆ ಆಗುವಷ್ಟು ಔಷಧ ಪೂರೈಸುವಂತೆ ಕೇಂದ್ರ ಆರೋಗ್ಯ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ರಾಜ್ಯವು ವಾರ್ಷಿಕ 80 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಮತ್ತು ಮಾಸಿಕ ಆಧಾರದ ಮೇಲೆ ಸುಮಾರು 6,800 ಟಿಬಿ ರೋಗಿಗಳಿಗೆ ನಿರಂತರ ಚಿಕಿತ್ಸೆ ನೀಡಬೇಕು. ಈ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ತೆಗೆದುಕೊಂಡು ಔಷಧ ಪೂರೈಸಬೇಕೆಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next