Advertisement

ಮಳೆಹಾನಿ ಪರಿಹಾರಕ್ಕೆ ಸಿಎಂಗೆ ಮನವಿ

02:47 PM Nov 22, 2021 | Team Udayavani |

ಮಸ್ಕಿ: ನಿರಂತರ ಮಳೆಯಿಂದಾಗಿ ಕ್ಷೇತ್ರದಲ್ಲಿ ಕೃಷಿ ಬೆಳೆಗಳು ಸೇರಿ ಆಸ್ತಿ-ಪಾಸ್ತಿ ಅಪಾರ ನಷ್ಟವಾಗಿದೆ. ತುರ್ತು ಪರಿಹಾರಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಲಾಗುತ್ತದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಹೇಳಿದರು.

Advertisement

ತಾಲೂಕಿನ ಸುಂಕನೂರು, ಹಿರೇದಿನ್ನಿ ಸೇರಿ ಇತರೆ ಗ್ರಾಮಗಳಿಗೆ ಭೇಟಿ ನೀಡಿ, ರೈತರ ಸಮಸ್ಯೆ ಆಲಿಸಿದ ಬಳಿಕ ಮಳೆಹಾನಿ ಕುರಿತು ವಸ್ತುಸ್ಥಿತಿ ಅರಿತು ಕೃಷಿ ಸಚಿವ ಬಿ.ಸಿ. ಪಾಟೀಲ್‌, ಕಂದಾಯ ಸಚಿವ ಆರ್‌. ಅಶೋಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿ, ಮಸ್ಕಿ ಕ್ಷೇತ್ರದಲ್ಲಿನ ಮಳೆಹಾನಿ ಪರಿಸ್ಥಿತಿ ವಿವರಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆಯಿಂದ ಭತ್ತ, ತೊಗರಿ, ಸೂರ್ಯಕಾಂತಿ, ಕಡಲೆ ಸೇರಿ ಇತರೆ ಬೆಳೆಗಳು ಸಂಪೂರ್ಣ ಹಾಳಾಗಿವೆ. ನ.23ರಿಂದ ಮಳೆಹಾನಿ ಸಮೀಕ್ಷೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ. ಆದರೂ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಕೂಡಲೇ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸಬೇಕು. ಬಳಿಕ ಸರ್ವೇ ನಡೆಸಿ ಮಳೆಯಿಂದ ಉಂಟಾದ ನಷ್ಟದ ವರದಿ ಸಿದ್ಧಪಡಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಈ ಪ್ರಕಾರ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದರು.

ಈ ವೇಳೆ ಬಿಜೆಪಿ ಮುಖಂಡರಾದ ಬಸವಂತರಾಯ ಕುರಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ರೈತ ಮೋರ್ಚಾ ಉಪಾಧ್ಯಕ್ಷ ರಾಂಬಾಬು ದಿನ್ನಿ ಕ್ಯಾಂಪ್‌, ವೆಂಕಟೇಶ್‌ ಬೋವಿ, ಬಸವರಾಜ ನಾಯಕ್‌ ಸಂಕನೂರ, ಬಸವರಾಜ್‌ ಚಿಕ್ಕದಿನ್ನಿ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next