Advertisement

ಸಮನ್ಸ್‌ ರದ್ದು ಕೋರಿ ದೆಹಲಿ ಹೈಕೋರ್ಟ್‌ಗೆ ಮನವಿ

11:09 PM Nov 01, 2019 | Team Udayavani |

ನವದೆಹಲಿ: ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ ರದ್ದು ಪಡಿಸಬೇಕೆಂದು ನಾಲ್ವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ಎದುರಿಸುವಂತೆ ನವದೆಹಲಿಯಲ್ಲಿರುವ ಕರ್ನಾಟಕ ಭವನದ ಉದ್ಯೋಗಿ ಹನುಮಂತಪ್ಪ, ಇತರ ಮೂವರಾದ ಕೆ.ವಿ.ಲಕ್ಷ್ಮಣ, ಮೀನಾಕ್ಷಿ ಮತ್ತು ಜಯಶೀಲ ಎಂಬುವರಿಗೆ ಸಮನ್ಸ್‌ ನೀಡಲಾಗಿತ್ತು.

ಅದನ್ನು ರದ್ದು ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾ.ಬೃಜೇಶ್‌ ಸೇಠಿ ನೇತೃತ್ವದ ನ್ಯಾಯಪೀಠ ಅರ್ಜಿಗಳನ್ನು ಮಾನ್ಯ ಮಾಡಿದ್ದು, ನ.4ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next