Advertisement
ಈ ಸಂದರ್ಭದಲ್ಲಿ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಗಂಗಾವತಿ ನಗರ ಠಾಣೆ, ಗ್ರಾಮೀಣ ವೃತ್ತದಲ್ಲಿ ಪಿಐ, ಸಿಪಿಐ ಆಗಿ ಸುಧೀರ್ಘಸೇವೆ ಸಲ್ಲಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಸಂಯೋಜಕರಾಗಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿಗಮ ಮಂಡಳಿ ನೇಮಕಾತಿಯಲ್ಲಿ ಶಾಂತಕುಮಾರ ಅವರಿಗೆ ಪ್ರಾಶಸ್ತ್ಯ ನೀಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಇವರ ಸಂಘಟನಾ ಶಕ್ತಿ ಪಕ್ಷಕ್ಕೆ ತುಂಬಾ ಅವಶ್ಯವಿದೆ. ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಜನಮೆಚ್ಚಿದ ಅಧಿಕಾರಿ ಎಂಬ ಕೀರ್ತಿಗೆ ಪಾತ್ರರಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ನಿಗಮ ಮಂಡಳಿ ನೇಮಕಾತಿಯಲ್ಲಿ ಆದ್ಯತೆ ನೀಡುವಂತೆ ಮನವಿ ಮಾಡಿದರು.
Advertisement
Retired Police Officer ಶಾಂತಕುಮಾರ್ ರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮನವಿ
07:29 PM Aug 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.