Advertisement

ವಿವಿಧ ಬೇಡಿಕೆ ಈಡೇರಿಕೆಗೆ ಅಪರ ಜಿಲ್ಲಾಧಿಕಾರಿಗೆ ಮನವಿ

02:12 PM Jan 25, 2020 | Suhan S |

ಗಂಗಾವತಿ: ಕಟ್ಟಡ ಕಾರ್ಮಿಕರು ಮತ್ತು ಇತರೆ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಕಾರ್ಮಿಕರು ಕೊಪ್ಪಳದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಬೇಕು. ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿದ 15 ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕು. ಈಗಾಗಲೇ ಗೃಹಭಾಗ್ಯ ಯೋಜನೆಯಲ್ಲಿ ಕೆಲವೊಂದು ನ್ಯೂನತೆ ಸೇರಿ ಒಟ್ಟು 21 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಯಿತು. ಜಿಲ್ಲಾಧ್ಯಕ್ಷ ರುದ್ರಪ್ಪ ಹಣವಾಳ, ಕನಕಗಿರಿ ತಾಲೂಕು ಅಧ್ಯಕ್ಷ ಉಮೇಶಕುಮಾರ, ಹನುಮಂತ, ವಿರುಪಣ್ಣ, ನಾಗರತ್ನ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next