Advertisement

ಸುನ್ನಿ ಕಮಿಟಿಯಿಂದ ಸಿಎಂಗೆ ಮನವಿ

10:42 PM Dec 23, 2019 | Team Udayavani |

ಶಿವಮೊಗ್ಗ: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಎಂದು ಒತ್ತಾಯಿಸಿ ಸುನ್ನಿ ಜಮೈತ್‌ವುಲ್‌ ಉಲ್ಮಾ ಕಮಿಟಿ ವತಿಯಿಂದ ಸೋಮ ವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್‌ಗೆ ಉತ್ತರ ಪ್ರದೇಶದಲ್ಲಿ 15 ಮಂದಿ ಮತ್ತು ಮಂಗಳೂರಿನಲ್ಲಿ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ.

Advertisement

ಇದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ದೇಶದ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ರಾಜ್ಯದಲ್ಲಿ ಗೋಲಿಬಾರ್‌, ಗಲಭೆ, ಹಿಂಸಾಚಾರದಿಂದ ತತ್ತರಿಸಿರುವ ಮುಸ್ಲಿಮರ ನೋವು ಪರಿಗಣಿಸಿ, ಕಾಯ್ದೆ ಜಾರಿಗೊಳಿಸಬಾರದು ಎಂದು ಕಮಿಟಿ ಸದಸ್ಯರು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next