ಕೂಡಲೇ ಈ ಕೊರತೆ ನೀಗಿಸುವಂತೆ ಒತ್ತಾಯಿಸಿ ಸಾಹಿತಿಗಳು ಹಾಗೂ ಕಲಾವಿದರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
Advertisement
ಸುಮಾರು 13 ಅಕಾಡೆಮಿಗಳಲ್ಲಿ ಮೈಸೂರಿನ ರಂಗಾಯಣ ಹಾಗೂ ವಿವಿಧ ಶಾಖೆಗಳಲ್ಲಿ ಇಲ್ಲಿನವರಿಗೆ ಅನ್ಯಾಯವಾಗಿದೆ. ಮೇಲಾಗಿ ಇತ್ತೀಚಿನ ವರ್ಷಗಳಲ್ಲಿ ಸಾಹಿತಿಗಳು, ಕಲಾವಿದರ ಅನುಭವ ಪರಿಗಣಿಸದೇ ಕೇವಲ ರಾಜಕೀಯ ಕಾರ್ಯಕರ್ತರನ್ನೇ ಪರಿಗಣಿಸುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಪ್ರಾ.ಬಿ.ಎಸ್. ಗವಿಮಠ ಅಸಮಾಧಾನ ವ್ಯಕ್ತಪಡಿಸಿದರು.
ಅಧಿವೇಶನ ನಡೆಯಬೇಕು. ಈ ಭಾಗದ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ಆದರೆ ಅಧಿವೇಶನದಲ್ಲಿ ಶಾಸಕರ ಗೈರು ಹಾಜರಾತಿ ಎದ್ದು ಕಾಣುತ್ತದೆ ಎಂದು ಹೇಳಿದರು. ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದರ ಉದ್ದೇಶ ಮರೆಯಬಾರದು. ಬೆಳಗಾವಿಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗುವಂತೆ ಬೆಳಗಾವಿಗೆ ಮತ್ತು ಅದರ ಸಮೀಪ ಹೆಚ್ಚಿನ ಪ್ರಮಾಣದಲ್ಲಿ ಉದ್ದಿಮೆಗಳು ಬರಬೇಕು. ಕನ್ನಡ ಭಾಷಿಕರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಏಣಗಿ ಸುಭಾಷ, ಬಸವರಾಜ ಗಾರ್ಗಿ, ಡಾ| ಮಹೇಶ ಗುರನಗೌಡರ ಸೇರಿದಂತೆ ಇತರರಿದ್ದರು.