Advertisement

ನಮ್ಮ ಪಾಲು ಕೇಳಲು ಸುಪ್ರೀಂಕೋರ್ಟ್‌ಗೆ ಮೊರೆ: ಸಿಎಂ

09:36 PM Mar 24, 2024 | Team Udayavani |

ಮೈಸೂರು: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಎಂದರೂ ಕೊಡುತ್ತಿಲ್ಲ. ಇದಕ್ಕಾಗಿ ನಾವು ಸುಪ್ರೀಂಕೋರ್ಟಿನ ಮೊರೆ ಹೋಗಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ನಮಗೆ ಬರಬೇಕಾದ ಶಾಸನಬದ್ಧ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡುತ್ತೇವೆ, ನಮ್ಮ ಬಳಿಯಿಂದ ದುಡ್ಡು ತಗೆದುಕೊಂಡು ಅಕ್ಕಿ ಕೊಡಿ ಎಂದು ಮನವಿ ಮಾಡಿದರೂ ಕೇಂದ್ರ ನಮ್ಮತ್ತ ತಿರುಗಿಯೂ ನೋಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಎಂದರೂ ಕೊಡುತ್ತಿಲ್ಲ. ಇದಕ್ಕಾಗಿ ನಾವು ಸುಪ್ರೀಂಕೋರ್ಟಿನ ಮೊರೆ ಹೋಗಬೇಕಾಯಿತು. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಬಹಳ ಖಾರವಾಗಿ ಪ್ರಶ್ನಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next