Advertisement

ಆಸ್ತಿ ಕರ ಹೆಚ್ಚಳ ಕೈ ಬಿಡಲು ಸಚಿವರಿಗೆ ಮನವಿ

09:15 AM May 29, 2020 | Suhan S |

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳದ ನಿರ್ಧಾರ ಕೈ ಬಿಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರಿಗೆ ಆಮ್‌ ಆದ್ಮಿ ಪಕ್ಷ ಮನವಿ ಮಾಡಿದೆ.

Advertisement

ಸಚಿವ ಜಗದೀಶ ಶೆಟ್ಟರ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಹಾಗೂ ಪದಾಧಿಕಾರಿಗಳು ಕೋವಿಡ್ ಹಾಗೂ ಲಾಕ್‌ಡೌನ್‌ ಸಂಕಷ್ಟ ಸ್ಥಿತಿಯಲ್ಲಿ ಆಸ್ತಿ ಕರ ಹೆಚ್ಚಳ ಸರಿಯಲ್ಲ. ಅದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ನಂತರ ಮಾತನಾಡಿದ ಸಚಿವರು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ತೆರಿಗೆ ಹೆಚ್ಚಳದ ನಿರ್ಧಾರ ಹಿಂಪಡೆಯುವ ಕುರಿತು ಸಚಿವ ಸಂಪುಟದಲ್ಲಿ ಸೂಕ್ತ ಠರಾವ್‌ ಪಾಸ್‌ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಆಶ್ವಾಸನೆ ನೀಡಿದರು.

ಮುಖಂಡರಾದ ವಿವೇಕಾನಂದ ಸಾಲಿನ್ಸ, ವಿಜಯ ಸಾಯಿ, ನವೀನ ರಾಜಪೂತ, ಲಕ್ಷ್ಮಣ ರಾಠೊಡ, ತ್ಯಾಗರಾಜ, ಹರಿಕೃಷ್ಣ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next