Advertisement

ಮರಳು ಅಕ್ರಮ ಸಾಗಾಟ ನಿಯಂತ್ರಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

02:00 PM Jul 15, 2019 | Team Udayavani |

ಇಳಕಲ್ಲ: ತಾಲೂಕಿನ ಕೆಲವು ಗ್ರಾಮಗಳಲ್ಲಿ ನಿರಂತರವಾಗಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದ್ದು, ನಿಯಂತ್ರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಕಾರ್ಯಕರ್ತರು ನಗರ ಹಾಗೂ ಗ್ರಾಮೀಣ ಪೊಲೀಸ್‌ ಠಾಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಕ್ರಮವಾಗಿ ದುಪ್ಪಟ್ಟು ದರದಲ್ಲಿ ಮರಳನ್ನು ಸಾಗಾಟ ಮಾಡುತ್ತಿದ್ದರೂ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಿ ಜನಸಾಮಾನ್ಯರಿಗೆ ಯೋಗ್ಯ ದರದಲ್ಲಿ ಮರಳು ಪೂರೈಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಮರಳು ಅಕ್ರಮ ಸಾಗಾಟ ಮುಂದುವರಿದರೇ ತಾಲೂಕಿನಾದ್ಯಂತ ಹೋರಾಟ ಮಾಡಬೇಕಾಗುವುದು ನಡೆಸಲಾಗುವುದು ಎಂದು ತಹಶೀಲ್ದಾರ್‌ ವೇದವ್ಯಾಸ ಮುತಾಲಿಕ ಅವರಿಗೆ ಮನವಿ ಸಲ್ಲಿಸಿದರು.ಕರವೇ ಅಧ್ಯಕ್ಷ ಅಶೋಕ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಹಾಂತೇಶ ವಂಕಲಕುಂಟಿ, ರೋಹಿತ ಬಾರಕೇರ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next