Advertisement

ಸಿಎಂ ಆಗಲು ಅನುಮತಿ ಕೋರಿದ್ದ ಅರ್ಜಿ ವಜಾ

02:15 PM Jul 07, 2018 | |

ಬೆಂಗಳೂರು: ವಿಧಾನಸೌಧ ಪಡಸಾಲೆ ಹಾಗೂ ಕಾಂಗ್ರೆಸ್‌ ಕಚೇರಿಯಲ್ಲಿ ಸದಾ ಕಾಣಿಸಿಕೊಳ್ಳುವ ಹರಿಶ್ಚಂದ್ರಗೌಡ ಎಂಬುವವರು ತಮಗೆ ರಾಜ್ಯದ ಮುಖ್ಯಮಂತ್ರಿ ಆಗಲು ಅನುಮತಿ ಕೊಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ತಮಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ರಾಜ್ಯದಲ್ಲಿ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ.

Advertisement

ಆದರೆ, ನಾನು ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಹರಿಶ್ಚಂದ್ರಗೌಡ ಸ್ವತಃ ವಾದಿಸಿದರೂ ಫ‌ಲ ಸಿಗಲಿಲ್ಲ. ಹರಿಶ್ಚಂದ್ರಗೌಡ ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ನೇತೃತ್ವದ ವಿಭಾಗೀಯ ಪೀಠ, ಈ ಅರ್ಜಿ ವೈಯಕ್ತಿಕ ಹಿತಾಸಕ್ತಿಯ ಅರ್ಜಿಯಾಗಿದೆ. ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಗೆ ಒಳಪಡುವುದಿಲ್ಲ. ಅರ್ಜಿ ವಿಚಾರಣೆ ನಡೆಸಲು ಕಾನೂನು ಆಧಾರಗಳಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next