Advertisement

Appointment: ಕೊನೆಗೂ ಸಹಾಯಕ ಪ್ರಾಧ್ಯಾಪಕರ ನೇಮಕ ಆದೇಶ ಹೊರಡಿಸಿದ ಸರಕಾರ

01:20 AM Sep 07, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯು ಕೊನೆಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹೊರಡಿಸಿ ಗೆಜೆಟ್‌ ಪ್ರಕಟನೆ ಹೊರಡಿಸಿದೆ.

Advertisement

ಆದೇಶ ಪ್ರತಿ ತಲುಪಿದ 15 ದಿನಗಳ ಒಳಗಾಗಿ ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಭವನ, 2ನೇ ಮಹಡಿ, ಅರಮನೆ ರಸ್ತೆ, ಬೆಂಗಳೂರು ಇಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಬಳಿಕ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ನಿಯಮಾನುಸಾರ ಜೇಷ್ಠತೆಯ ಆಧಾರದ ಮೇಲೆ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಸಿ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಆದೇಶ ನೀಡಲಿದ್ದಾರೆ.

ಅಭ್ಯರ್ಥಿಗಳು ಸ್ಥಳ ನಿಯುಕ್ತಿಗೊಳಿಸಿದ ಕಾಲೇಜಿನಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ದಿನಾಂಕದಿಂದ ವೇತನ ಹಾಗೂ ಇತರ ಭತ್ತೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಹಾಗೆಯೇ ಸರಕಾರದ ಪೂರ್ವಾನುಮತಿ ಪಡೆಯದೆ ನಿಗದಿತ ಅವಧಿಯೊಳಗೆ ವರದಿ ಮಾಡಿಕೊಳ್ಳಲು ವಿಫ‌ಲವಾಗುವ ಅಭ್ಯರ್ಥಿಯ ನೇಮಕಾತಿ ಆದೇಶ ಅನೂರ್ಜಿತವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next