Advertisement

ಅಪ್ಪಚ್ಚು ರಂಜನ್‌ ನಾಮಪತ್ರ ಸಲ್ಲಿಕೆ

07:00 AM Apr 21, 2018 | |

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರ ತೊಡಗಿದ್ದು, ಬಿಜೆಪಿ ಅಭ್ಯರ್ಥಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಶುಕ್ರವಾರ ನಾಮಪತ್ರ ಸಲ್ಲಿಸಿದರು.

Advertisement

ನಗರದ ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಪ್ಪಚ್ಚುರಂಜನ್‌ ಸಾವಿರಾರು ಕಾರ್ಯಕರ್ತರ ಬೆಂಬಲದೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. 

ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನನಗೆ ಈ ಬಾರಿ ಕೂಡ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಂಸದ ಪ್ರತಾಪ್‌ ಸಿಂಹ, ವಿರಾಜ ಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಬಿ. ಭಾರತೀಶ್‌ ಉಪಸ್ಥಿತರಿದ್ದರು. ಏತನ್ಮಧ್ಯೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಹಾಲಿ ಶಾಸಕ ಕೆ.ಜಿ.ಬೋಪಯ್ಯ ಅವರು ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಕಾರ್ಯದರ್ಶಿ ಜೆ.ಪಿ. ನಡ್ಡಾ ಶುಕ್ರವಾರ ಪ್ರಕಟಿಸಿರುವ ಅಭ್ಯರ್ಥಿಗಳ 3ನೇ ಪಟ್ಟಿಯಲ್ಲಿ ಕೆ.ಜಿ.ಬೋಪಯ್ಯ ಅವರು ಸ್ಥಾನ ಪಡೆದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next