Advertisement

ಮುರಾಘಾ ಮಠಕ್ಕೆ ಜಿಲ್ಲಾ ನ್ಯಾಯಾಧೀಶರ ನೇಮಕ

07:58 PM Jul 03, 2023 | Team Udayavani |

ಬೆಂಗಳೂರು: ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಹೈಕೋರ್ಟ್‌ ಆದೇಶಿಸಿದೆ.

Advertisement

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಸರಕಾರದ ಕ್ರಮವನ್ನು ರದ್ದುಪಡಿಸಿದ್ದ ಏಕ ಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಿಸಿ, ಮಂಗಳವಾರ ಬೆಳಗ್ಗೆ ಅಧಿಕಾರ ವಹಿಸಿಕೊಳ್ಳಬೇಕೆಂದು ಸೂಚನೆ ನೀಡಿತು.

ತಾತ್ಕಾಲಿಕವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು (ಜಿಲ್ಲಾ ನ್ಯಾಯಾಧೀಶರು) ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಗಳ ದಿನ ನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳಬೇಕು. ಆದರೆ ಯಾವುದೇ ನೀತಿ ನಿರೂಪಣೆಗಳನ್ನು ಮಾಡಲು ಮುಂದಾಗಬಾರದು. ಇದಕ್ಕೆ ಜಿಲ್ಲಾಧಿಕಾರಿಗಳು ಅಗತ್ಯವಿರುವ ಸಹಕಾರವನ್ನು ನೀಡಬೇಕೆಂದು ನ್ಯಾಯಪೀಠ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next