Advertisement

Manipur ಹೈಕೋರ್ಟ್‌ ಜಡ್ಜ್ ಸುಪ್ರೀಂಗೆ ನೇಮಕ: ಮೊದಲ ಬಾರಿಗೆ ಇಂಥ ತೀರ್ಮಾನ

10:01 PM Jul 16, 2024 | Team Udayavani |

ನವದೆಹಲಿ: ಮಣಿಪುರ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್‌.ಕೋಟೀಶ್ವರ್‌ ಸಿಂಗ್‌ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಹೀಗಾಗಿ, ಮೊದಲ ಬಾರಿಗೆ ಮಣಿಪುರಕ್ಕೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಸ್ಥಾನಕ್ಕೆ ನೇಮಕ ಮಾಡಿದಂತಾಗಿದೆ.

Advertisement

ಮದ್ರಾಸ್‌ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್‌.ಮಹಾದೇವನ್‌ ಅವರನ್ನು ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಂ ಮೇಘ್ವಾಲ್‌ ಟ್ವೀಟ್‌ ಮಾಡಿದ್ದಾರೆ.

ಇದರಿಂದಾಗಿ ಸುಪ್ರೀಂಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ಜಡ್ಜ್ಗಳ ಹುದ್ದೆಯೂ ಭರ್ತಿಯಾದಂತಾಗಿದೆ. ಇದರಿಂದಾಗಿ ಮಣಿಪುರಕ್ಕೆ ಕೂಡ ಸ್ಥಾನ ಮಾನ್ಯತೆ ಕಲ್ಪಿಸಿದಂತಾಗಿದೆ ಎಂದು ಸರ್ಕಾರ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next