Advertisement

ಯೋಜನಾ ಪ್ರಾಧಿಕಾರಕ್ಕೆ ಸದಸ್ಯರ ನೇಮಕ

03:48 PM Feb 01, 2020 | Suhan S |

ಮಾಲೂರು: ತಾಲೂಕು ನಗರ ಹಾಗೂ ಗ್ರಾಮೀಣ ಯೋಜನಾ ಪ್ರಾಧಿಕಾರಕ್ಕೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಿ.ಎಸ್‌.ಶಿವ ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಶುಕ್ರವಾರ ಪದಗ್ರಹಣ ಮಾಡಿದರು.

Advertisement

ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಸ್ತಿ ಸತೀಶ್‌ ಆರಾಧ್ಯ ಅವರನ್ನು ಕಳೆದ ನ.4ರಂದು ಅಯ್ಕೆ ಮಾಡಿದ್ದ ಸರ್ಕಾರ, ಪ್ರಸ್ತುತ ನಗರ ಬಿಜೆಪಿ ಅಧ್ಯಕ್ಷ ಎಂ.ಸಿ.ರವಿ, ಸಿದ್ದನಹಳ್ಳಿ ಪ್ರಭಾಕರ್‌ ಹಾಗೂ ತಾಪಂ ಮಾಜಿ ಸದಸ್ಯೆ ಅಮರಾವತಿ ಅವರನ್ನುಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಪ್ರಾಧಿಕಾರದ ಕಚೇರಿಯಲ್ಲಿ ಪದಗ್ರಹಣ ಮಾಡಿದ ಸದಸ್ಯರನ್ನು ಸ್ವಾಗತಿಸಿ ಮಾತನಾಡಿದ ಅಧ್ಯಕ್ಷ ಸತೀಶ್‌ ಆರಾಧ್ಯ, ತಮ್ಮ ಶಿಫಾರಸ್ಸಿನ ಮೇರೆಗೆ ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ. ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ಸಭೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಬೇಕಾಗಿದೆ. ಪ್ರಾಧಿಕಾರದಿಂದ ಅನೇಕ ಸಾರ್ವಜನಿಕ ಕೆಲಸಗಳು ಬಾಕಿ ಇದ್ದು, ಶೀಘ್ರ ಪೂರ್ಣಗೊಳಿಸುವುದಾಗಿ ತಿಳಿಸಿದರು.

ಪ್ರಾಧಿಕಾರದ ಮೀಸಲು ಹಣದಲ್ಲಿ ಕೆರೆಯ ಅಭಿವೃದ್ಧಿಗೆ ಹಿಂದೆ ಇದ್ದ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆಯು ಕುಂಟಿತವಾಗಿದೆ. ವಸತಿಸಂಕೀರ್ಣಗಳ ಅಭಿವೃದ್ಧಿ, ಭೂಪರಿವರ್ತನೆ ಕಡತಗಳ ವಿಲೇವಾರಿಗೆ ಆದ್ಯತೆ ನೀಡುವುದಾಗಿ ಹೇಳಿದರು.

ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಆರ್‌.ವೆಂಕಟೇಶ್‌, ಪುರಸಭೆ ಸದಸ್ಯರಾದ ಭಾನುತೇಜ್‌, ಸಿಎಂಸಿ ಮುನಿರಾಜು, ಮಾಜಿ ಸದಸ್ಯೆಶ್ರೀವಳ್ಳಿರಮೇಶ್‌, ದೊಡ್ಡಿ ರಾಜಪ್ಪ, ಎಎಲ್‌ಕೆ ಕುಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next