Advertisement

five-state election ಮುಗಿದ ಬಳಿಕ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ನೇಮಕ: ಬೊಮ್ಮಾಯಿ

09:00 PM Oct 10, 2023 | Team Udayavani |

ಜಮಖಂಡಿ: ಪಂಚರಾಜ್ಯ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷದ ನಾಯಕನ ನೇಮಕ ನಡೆಯಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ನೇಮಕ ವಿಳಂಬವಾಗಿದೆ. ಈ ಕುರಿತು ಈಗಾಗಲೇ ದೆಹಲಿ ವರಿಷ್ಠರ ಜತೆಗೆ ಮಾತನಾಡಿದ್ದೇನೆ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಎರಡು ತಿಂಗಳ ಹಿಂದೆಯೇ ಕೇಂದ್ರ ಸರ್ಕಾರ ಬರ ನಿರ್ವಹಣೆಗೆ 350 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲಾ ಧಿಕಾರಿಗಳ ಖಾತೆಯಲ್ಲಿ ಅನುದಾನ ಜಮಾ ಆಗಿದೆ. ಬರ ಪರಿಹಾರ ನೀಡದರೆ ಮತ್ತೆ ಉಳಿದ ಪರಿಹಾರ ನೀಡುವುದಕ್ಕೆ ಹಣದ ಅವಶ್ಯಕತೆ ಎದುರಿಸುವ ಶಕ್ತಿ ಇಲ್ಲದ ಹಿನ್ನೆಲೆಯಲ್ಲಿ ಬರ ನಿರ್ವಹಣೆ ಪರಿಹಾರ ವಿತರಣೆಯಲ್ಲಿ ಮೀನಮೇಷ ಹಾಕುತ್ತಿದೆ. ಕೇಂದ್ರ ಸರ್ಕಾರದ ಅನುದಾನ ಈಗಲೇ ನೀಡಿದರೆ ಖಜಾನೆ ಪೂರ್ಣವಾಗಿ ಖಾಲಿಯಾಗುವ ಭಯ ಅವರಲ್ಲಿ ಕಾಡುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next