Advertisement

“ನಾರಾಯಣ’ಟ್ರೇಲರ್‌ಗೆ ಮೆಚ್ಚುಗೆ

09:02 AM Dec 01, 2019 | Team Udayavani |

ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಟ್ರೇಲರ್‌ ಗುರುವಾರ (ನ. 28) ಅದ್ಧೂರಿಯಾಗಿ ಹೊರಬಂದಿದೆ. ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ಗೆ ಎಲ್ಲಾ ಭಾಷೆಗಳಲ್ಲೂ ದೊಡ್ಡ ಪ್ರತಿಕ್ರಿಯೆ ಸಿಗುತ್ತಿದೆ.

Advertisement

ಕನ್ನಡದಲ್ಲಿ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಟ್ರೇಲರ್‌ ನೋಡಿರುವ ನಟ ಸುದೀಪ್‌, ಪುನೀತ್‌ ರಾಜಕುಮಾರ್‌, ಶಿವರಾಜಕುಮಾರ್‌, ನಿರ್ದೇಶಕ ಪ್ರಶಾಂತ್‌ ನೀಲ್‌, ಅನೂಪ್‌ ಭಂಡಾರಿ, ನಿರೂಪ್‌ ಭಂಡಾರಿ ಮೊದಲಾದ ಸ್ಟಾರ್‌ ನಟರು, ನಿರ್ದೇಶಕರು, ನಿರ್ಮಾಪಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಚಿತ್ರಕ್ಕೆ ಶುಭ ಕೋರಿದ್ದಾರೆ.

ಇನ್ನು ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಧನುಶ್‌, ಮಲಯಾಳಂನಲ್ಲಿ ನಿವಿನ್‌ ಪೌಲ್‌ ಸೇರಿದಂತೆ ಬೇರೆ ಬೇರೆ ಚಿತ್ರರಂಗದ ಅನೇಕ ಸ್ಟಾರ್‌ ನಟರು ಮತ್ತು ತಂತ್ರಜ್ಞರು ಕೂಡ ನಾರಾಯಣನಿಗೆ ಜೈಕಾರ ಹಾಕುತ್ತಿದ್ದಾರೆ. ಒಟ್ಟಾರೆ ತೆರೆಗೆ ಬರೋದಕ್ಕೂ ಮುಂಚೆಯೇ ನಾರಾಯಣನ ಸೌಂಡ್‌ ಜೋರಾಗುತ್ತಿದ್ದು, ಚಿತ್ರದ ಬಿಡುಗಡೆಯತ್ತ ಎಲ್ಲರ ಗಮನ ನೆಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next