Advertisement

ಮುಕ್ತ ವಿವಿಗೆ ಮಾನ್ಯತೆ ನೀಡಿ

06:25 AM Dec 13, 2017 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2017-18ನೇ ಸಾಲಿನಲ್ಲಿ ತಾಂತ್ರಿಕೇತರ ಕೋರ್ಸ್‌ ಗಳನ್ನು ನಡೆಸಲು ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ)ಕ್ಕೆ  ಹೈಕೋರ್ಟ್‌ ಆದೇಶಿಸಿದೆ.

Advertisement

ಕೆಎಸ್‌ಒಯುನ 2017-18ನೇ ಸಾಲಿನ ಕೋರ್ಸ್‌ಗಳಿಗೆ ಮಾನ್ಯತೆ ನೀಡಲು ನಿರಾ ಕರಿಸಿದ್ದ ಯುಜಿಸಿ ಕ್ರಮ ಪ್ರಶ್ನಿಸಿ ವಿವಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಈ ಕುರಿತು ಯುಜಿಸಿಗೆ ನಿರ್ದೇಶನ ನೀಡಿದೆ. ಈ ಆದೇಶ 2017-18ನೇ ಸಾಲಿನ ತಾಂತ್ರಿಕೇತರ ಕೋರ್ಸ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಅಷ್ಟೇ ಅಲ್ಲ, ಕೆಎಸ್‌ಒಯು ಮಾತ್ರ ವಿದ್ಯಾರ್ಥಿ ಗಳಿಗೆ ಪ್ರವೇಶಾತಿ ಕಲ್ಪಿಸಬೇಕು. ಕೆಎಸ್‌ಒಯು ಅಡಿಯಲ್ಲಿ ಬರುವ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next