Advertisement

ಲೋಕಾ ಕಾಯ್ದೆ ತಿದ್ದುಪಡಿ ವಿಧೇಯಕಕ್ಕೆ ಅಸ್ತು

11:22 PM Mar 17, 2020 | Team Udayavani |

ವಿಧಾನಸಭೆ: ಯಾವುದೇ ಪ್ರಕರಣ, ದೂರು, ವಿಷಯವನ್ನು ಆಲಿಸಲು, ಪರಿಗಣಿಸಲು ಅಥವಾ ಯಾವುದೇ ರೀತಿಯಲ್ಲಿ ವ್ಯವಹರಿಸಲು, ವಿಲೇವಾರಿ ಮಾಡಲು ಲೋಕಾಯುಕ್ತರು ಹಿಂದೆ ಸರಿಯಲು ಇಚ್ಛಿಸಿದರೆ ಅಂತಹ ಪ್ರಕರ ಣಗಳ ವಿಚಾರಣೆಯನ್ನು ಉಪಲೋಕಾಯುಕ್ತರಿಗೆ ನೀಡಲು ಅವಕಾಶ ಕಲ್ಪಿಸುವ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕಕ್ಕೆ ಮಂಗಳವಾರ ಅನುಮೋದನೆ ನೀಡಲಾಯಿತು.

Advertisement

ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ವಿಧೇಯಕ ಕುರಿತು ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಲೋಕಾಯುಕ್ತರು ತಾವೇ ಖುದ್ದಾಗಿ ವಿಚಾರಣೆ ಮಾಡಲು ಸಾಧ್ಯವಿಲ್ಲವೆನಿಸಿದ ಪ್ರಕರಣ ಗಳನ್ನಷ್ಟೇ ಉಪಲೋಕಾಯುಕ್ತರು ವಿಚಾರಣೆ ನಡೆಸಲು ಅವಕಾಶ ಕಲ್ಪಿಸುವುದು ವಿಧೇಯಕ ಉದ್ದೇಶ.

ಕೆಲವೊಮ್ಮೆ ನಿರ್ದಿಷ್ಟ ಕಾರಣಗಳಿಗೆ ಲೋಕಾಯುಕ್ತರು ಆಯ್ದ ಪ್ರಕರಣಗಳ ವಿಚಾರಣೆಯಿಂದ ಹಿಂದೆ ಸರಿಯುವ ಸಾಧ್ಯತೆ ಇರುತ್ತದೆ. ಆ ಸಂದರ್ಭದಲ್ಲಿ ಪ್ರಕರಣ ವರ್ಗಾವಣೆಗೆ ಅವಕಾಶವಿರಲಿಲ್ಲ. ಆ ಹಿನ್ನೆಲೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next