Advertisement

ರಾಜ್ಯದ ಬಾಕಿಯಿರುವ ನೀರಾವರಿ ಯೋಜನೆಗೆ ಅನುಮೋದನೆ ನೀಡಿ

08:03 PM Nov 10, 2022 | Team Udayavani |

ಬೆಂಗಳೂರು: ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ ಸಚಿವ ಗೋವಿಂದ ಕಾರಜೋಳ ಅವರು ಮಹಾದಾಯಿ, ಮೇಕೆದಾಟು  ಸಹಿತ ಬಾಕಿಯಿರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

Advertisement

ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಷಿ  ನಿವಾಸದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ರಾಜ್ಯದ  ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಪ್ರಸ್ತಾವನೆ ಹಂತದಲ್ಲಿದ್ದು, ಇದಕ್ಕೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸ ಇದೆ. ಮಹಾದಾಯಿ ಯೋಜನೆಗೂ ಶೀಘ್ರ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next