Advertisement

ಬೆಳ್ತಂಗಡಿ : ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಔಷಧ ವಿತರಣೆ

10:26 AM Nov 23, 2022 | Team Udayavani |

ಬೆಳ್ತಂಗಡಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಬಾಧಿಸಿರುವ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರವು 4 ಕೋಟಿ ರೂ. ಅನುದಾನ ಘೋಷಿಸಿದ ಬೆನ್ನಲ್ಲೇ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಶಿಲೀಂಧ್ರ ನಾಶಕ ಔಷಧ ವಿತರಿಸಲಾಗುತ್ತಿದೆ.

Advertisement

ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳಲ್ಲಿ ಸುಮಾರು 20,534.50 ಹೆಕ್ಟೇರ್‌ನಲ್ಲಿ ಎಲೆಚುಕ್ಕಿ ರೋಗ ಬಾಧಿಸಿತ್ತು. ಔಷಧ ಖರೀದಿಸಲು ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ.ಗಳಂತೆ 1.50 ಹೆಕ್ಟೇರ್‌ ವರೆಗೆ ರೈತರಿಗೆ ಸಹಾಯಧನ ನೀಡಲು ಅಂದಾಜು 8 ಕೋ.ರೂ. ಅಗತ್ಯವಿದೆ. ಆರಂಭದಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮೊದಲನೇ ಸಿಂಪರಣೆಗೆ 4 ಕೋ.ರೂ. ಆವಶ್ಯಕತೆ ಮನಗಂಡು ಸರಕಾರ ಅನುದಾನ ನೀಡಲು ಸಮ್ಮತಿಸಿದೆ.

ಕೇಂದ್ರದ ತಂಡ ಭೇಟಿ
ಪುತ್ತೂರು: ಎಲೆಚುಕ್ಕಿ ಹಾಗೂ ಹಳದಿ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ವಿಜ್ಞಾನಿಗಳ ವಿಶೇಷ ಅಧ್ಯಯನ ತಂಡವನ್ನು ಕಳುಹಿಸಿದೆ. ತಂಡವು ಸುಳ್ಯ, ಕಳಸ, ಶೃಂಗೇರಿ ಭಾಗಗಳಲ್ಲಿ ತೆರಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮರ್ಕಂಜದ ಮಾಪಲತೋಟ, ಬಲ್ಕಾಡಿ ಮತ್ತು ದಾಸರಬೈಲಿನ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next