Advertisement

ಅಪರಾಧಿಗಳು ಸಿಕ್ಕಿ ಬೀಳುವುದು ಖಚಿತ‌: ಆರಗ

10:48 PM Aug 31, 2021 | Team Udayavani |

ಚಿಕ್ಕಮಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ  ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ಶಿಕ್ಷೆಯಾಗುವಂತೆ ವಿಶೇಷ ಶ್ರಮ ವಹಿಸುತ್ತಿದ್ದಾರೆ. ಅಪರಾಧ ಎಸಗಿ ತಪ್ಪಿಸಿಕೊಳ್ಳಬಹುದೆಂದು ಯಾರೂ ಭಾವಿಸಿಕೊಳ್ಳಬೇಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Advertisement

ಮಂಗಳವಾರ ಜಿಲ್ಲೆಯ ಕಡೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ  ಪ್ರಕರಣವನ್ನು ಶೀಘ್ರವೇ ಭೇದಿಸಿದ ಸಿಬಂದಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂತ್ರಸ್ತೆ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ, ಈ ಸ್ಥಿತಿಯಲ್ಲಿ ಆಕೆಯ ಮೇಲೆ ಒತ್ತಡ ಹೇರುವುದು ಸರಿಯಲ್ಲ.  ಸ್ವಲ್ಪ ಸಮಯದ ಬಳಿಕ ಆಕೆ ಹೇಳಿಕೆ ನೀಡಬಹುದು  ಎಂದರು.

 

 

Advertisement

Udayavani is now on Telegram. Click here to join our channel and stay updated with the latest news.

Next