Advertisement

ಆರಗ ಜ್ಞಾನೇಂದ್ರ ಒಳ್ಳೆಯ ಮನುಷ್ಯ, ಆದರೆ ಉತ್ತಮ ಗೃಹ ಸಚಿವರಲ್ಲ: ಪ್ರಿಯಾಂಕ್ ಖರ್ಗೆ

02:17 PM Apr 17, 2022 | Team Udayavani |

ಬೆಂಗಳೂರು: ಸಚಿವ ಆರಗ ಜ್ಞಾನೇಂದ್ರ ಅವರು ಒಳ್ಳೆಯ ಮನುಷ್ಯ. ಆದರೆ ಉತ್ತಮ ಗೃಹ ಸಚಿವರಲ್ಲ. ದಯವಿಟ್ಟು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆಯಲ್ಲಿ ಸುಮಾರು 2,10 ಕೋಟಿ ರೂ ಭ್ರಷ್ಟಾಚಾರ ನಡೆದಿದೆ. ಬಿಜೆಪಿಯವರಿಗೆ ಸೇರಿದ ವ್ಯಕ್ತಿಯ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದರು.

ಇದನ್ನೂ ಓದಿ:ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ

ರಾಜ್ಯದಲ್ಲಿ 40 ಪರ್ಸೆಂಟೇಜ್ ಸರ್ಕಾರವಿದೆ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಎಲ್ಲಾ ಇಲಾಖೆಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದರೆ ಇಡೀ ಸಂಪುಟ ಖಾಲಿಯಾಗಲಿದೆ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next