Advertisement

ಬೆಳಗಾವಿ ಕಲ್ಲು ತೂರಾಟ : ಪುಂಡರನ್ನು ಸರ್ಕಾರ ಸುಮ್ಮನೆ ಬಿಡಲ್ಲ : ಆರಗ ಜ್ಞಾನೇಂದ್ರ

08:22 AM Dec 18, 2021 | Team Udayavani |

ಬೆಳಗಾವಿ :  ನಗರದ ಸಂಭಾಜಿ ವೃತ್ತದಲ್ಲಿ ಶುಕ್ರವಾರ ಹಿಂದೂಪರ ಸಂಘಟನೆಗಳು ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ ನಡೆಸಿರುವ ಬಗ್ಗೆ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಪುಂಡರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ.ಇಂತಹ ಪುಂಡರನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮವನ್ನು ನೋಡಿ ಎಂದಿದ್ದಾರೆ.

ಇದು ಬೆರಳೆಣಿಕೆಯಷ್ಟು ಪುಂಡರು ಮಾಡುತ್ತಿರುವ ಕೃತ್ಯ. ಇವರನ್ನು ಸರ್ಕಾರ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ. ಕ್ರಮ ಕೈಗೊಳ್ಳುತ್ತದೆ ಎಂದು ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next