Advertisement

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

02:58 PM Sep 29, 2023 | keerthan |

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಹಾಗೂ ರಾಜ್ಯದ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಗೃಹ ಸಚಿವ, ಹಾಲಿ ಶಾಸಕ‌ ಆರಗ ಜ್ಞಾನೇಂದ್ರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾವೇರಿ ನೀರಿನ ಬಗ್ಗೆ ವಿಚಿತ್ರವಾಗಿ ಆಡುತ್ತಿದೆ. ಐಎನ್ ಡಿಐಎ ಒಕ್ಕೂಟದ ಹಿತ ಕಾಪಡುವುದು ಮುಖ್ಯ ಹೊರತು ರಾಜ್ಯದ ಜನರ ಹಿತ ಮುಖ್ಯವಾಗಿಲ್ಲ. ಬರುವಂತಹ ಚುನಾವಣೆಯಲ್ಲಿ ತಮಿಳುನಾಡಿನ ಒಕ್ಕೂಟದ ಗುಂಪು ಗೆಲ್ಲಲು ಏನು ಬೇಕೋ ಅದನ್ನು ನಮ್ಮ ರಾಜ್ಯದ ಮಂತ್ರಿಗಳು ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ರಾಜ್ಯ ವ್ಯಾಪಿ ಬಂದ್ ಆಗುತ್ತಿದೆ ಅದಕ್ಕೆ ನಮ್ಮ ಬೆಂಬಲವಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಆರಗ ಹೆಸರು ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರ ಹೆಸರು ಕೇಳಿ ಬರುತ್ತಿದೆ. ಹೈಕಮಾಂಡ್ ಏನು ಮಾಡುತ್ತದೆ ಅದನ್ನು ಸ್ವೀಕಾರ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next