Advertisement

ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ, ಮುಂದೆ ಕರ್ನಾಟಕದಲ್ಲಿ ಲಂಗೋಟಿ ಸರದಿ : ಆರಗ

04:39 PM Jun 08, 2022 | Team Udayavani |

ಚಿತ್ರದುರ್ಗ: ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Advertisement

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ವಿಚಾರಗಳಿಲ್ಲ. ಅವರಿಗೆ ವಿರೋಧ ಪಕ್ಷವಾಗುವ ಅರ್ಹತೆಗಳೂ ಇಲ್ಲ. ಟೀಕೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಚಡ್ಡಿ ಸುಡುವ ಅಭಿಯಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹೆಚ್ಚು ಸಾಲ ಮಾಡಿದ್ದಾರೆ ಎನ್ನುವ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರ ಮನೆಗಾಗಿ ಸಾಲ ಮಾಡಿದ್ದಾರಾ, ಸಿದ್ದರಾಮಯ್ಯ ಕಾಲದಲ್ಲಿ ದೇವಲೋಕ ತಂದು ಕೆಳಗಿಳಿಸಿದ್ದಾರಾ, ಒಂದು ಸರ್ಕಾರ ಆಡಳಿತ ವ್ಯವಸ್ಥೆ ಬಗ್ಗೆ ಅರಿವು ಇರುವವರು ಹೀಗೆ ಲಘುವಾಗಿ ಟೀಕೆ ಮಾಡುವುದಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಟೆಂಡರ್ ಹಾಕಿದವರಿಗೆ ಬಿಲ್ ಕೊಡದೇ ಸತಾಯಿಸಿರುವ ಉದಾಹರಣೆಗಳೂ ಇವೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಯಾವಾಗ ತಾಗಿಕೊಂಡಿರುತ್ತಾರೆ ಗೊತ್ತಿಲ್ಲ. ಅವರಿಬ್ಬರ ಜಗಳದಲ್ಲಿ ನಾವು ಸೇಫ್ ಎಂದು ಆರಗ ಜ್ಞಾನೇಂದ್ರ ಸಿದ್ಧಾಂತ ಇಲ್ಲದಿದ್ದರೆ ರಾಜಕಾರಣದಲ್ಲಿ ಯಾರು ಏನಾಗುತ್ತಾರೆ ಗೊತ್ತಾಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ : 17 ವರ್ಷದ ತರುಣಿಯ ಮೇಲೆ ಚಲಿಸುತ್ತಿರುವ ಬಸ್ ನಲ್ಲೇ ಗ್ಯಾಂಗ್ ರೇಪ್

Advertisement

ಬಿಜೆಪಿ ವಿರುದ್ಧ ಮುತಾಲಿಕ್ ಆರೋಪ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಹಿಂದೂ ಸಂಘಟನೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿಲ್ಲ. ಸರ್ಕಾರದ ನೀತಿ ನಿಯಮಗಳ ಅನುಸಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ನಡೆಸುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನವಿದೆ. ಮತ್ತೊಬ್ಬರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರ ನಡೆಸುವಷ್ಟು ದರಿದ್ರತನ ನಮಗಿಲ್ಲ ಎಂದರು.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಕುರಿತು ಮಾತನಾಡಿದ ಅವರು, ಶಾಂತಿ-ಸುವ್ಯವಸ್ಥೆ ಹದಗೆಡದಂತೆ ನಿರ್ವಹಣೆ ಮಾಡುತ್ತೇವೆ. ಇದಕ್ಕಾಗಿ ಕಾನೂನು, ನ್ಯಾಯಾಲಯ ಹಾಗೂ ಇಲಾಖೆಗಳಿವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next