Advertisement

Aranthodu: ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

01:10 AM Oct 10, 2023 | Team Udayavani |

ಅರಂತೋಡು: ಸುಳ್ಯದಲ್ಲಿ ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿದ ವ್ಯಕ್ತಿಯೋರ್ವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದವರು ಸೋಮವಾರ ಮೃತಪಟ್ಟಿದ್ದಾರೆ.

Advertisement

ಆಲೆಟ್ಟಿ ಗ್ರಾಮದ ಕೋಲ್ಚಾರ್‌ ಕೂಳಿಯಡ್ಕ ನಿವಾಸಿ ಕರುಣಾಕರ (45)ಮೃತಪಟ್ಟವರು. ಸುಳ್ಯ ಆಲೆಟ್ಟಿ ಕ್ರಾಸ್‌ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ದಿದ್ದರು. ರವಿವಾರ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮತ್ತೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರು ವ್ಯಕ್ತಿಯನ್ನು ಮಂಗಳೂರಿಗೆ ಕರೆದೊಯ್ಯುಲು ಸೂಚಿಸಿದರು. ಬಳಿಕ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next