Advertisement

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು

10:30 AM Jun 30, 2022 | Team Udayavani |

ಅರಂತೋಡು: ಕಾರೊಂದು ಅಪಘಾತಕ್ಕೀಡಾಗಿ ತೋಟಕ್ಕೆ ಮಗುಚಿ ಬಿದ್ದ ಘಟನೆ ಬುಧವಾರ ರಾತ್ರಿ ಆಲೆಟ್ಟಿ ಗ್ರಾಮದ ನಾರ್ಕೋಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಪಕ್ಕದ ತೋಟಕ್ಕೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಹೈದ್ರಾಬಾದ್ ಮೂಲದ ಪ್ರವಾಸಿಗರು ಕನ್ಯಾಕುಮಾರಿ, ಗುರುವಾಯೂರು ಯಾತ್ರೆ ಮುಗಿಸಿ ಬಂದಡ್ಕ-ಸುಳ್ಯ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಕಾರಿನಲ್ಲಿ 4 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next