Advertisement

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

03:57 PM May 02, 2024 | Team Udayavani |

ಅರಂತೋಡು: ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲುಗುಂಡಿ ಕಡೆಪಾಲ ಬಳಿ ನಡೆದಿದೆ.

Advertisement

ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ.

ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕಾರು, ಮ್ಯಾಕ್ಸ್ ಜೀಪು ಮತ್ತು ಬೈಕ್ ಅಪಘಾತಕ್ಕೆ ಈಡಾಗಿದೆ ಎಂದು ತಿಳಿದು ಬಂದಿದೆ.

ಕಾರು ಮತ್ತು ಜೀಪು ಮಧ್ಯೆ ಅಪಘಾತ ಉಂಟಾಗಿದ್ದು, ಬಳಿಕ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಉಂಟಾಗಿದೆ. ಕಾರು, ಬೈಕ್ ಹಾಗೂ ಜೀಪಿಗೆ ಹಾನಿ ಉಂಟಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next