Advertisement

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

08:22 AM Oct 25, 2024 | Team Udayavani |

ಅರಂತೋಡು: ತೊಡಿಕಾನ ಸಮೀಪದ ಬಂಗಾರ ಕೋಡಿಯಲ್ಲಿ ಗುರುವಾರ ರಾತ್ರಿ ತೋಟವೊಂದಕ್ಕೆ ಕಾಡಾನೆಗಳು ದಾಳಿ ನಡೆಸಿ, ಬೆಳೆಗಳನ್ನು ನಾಶಪಡಿಸಿದ ಘಟನೆ ವರದಿಯಾಗಿದೆ.

Advertisement

ವಿದ್ಯಾ ಅವರ ತೋಟಕ್ಕೆ ದಾಳಿ ನಡೆಸಿದ ಕಾಡಾನೆಗಳು 10 ಅಡಿಕೆ ಮರ, ಎರಡು ಬಾಳೆ, ಒಂದು ದೀವಿಹಲಸು ಮರವನ್ನು ಮುರಿದು ಹಾಕಿವೆ. ಅಲ್ಲದೆ ಒಂದು ತೆಂಗಿನ ಮರಕ್ಕೆ ಹಾನಿ ಮಾಡಿವೆ ಎಂದು ತಿಳಿದು ಬಂದಿದೆ.

ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಹಾಗೂ ಜನರು ಆತಂಕದಿಂದಲೇ ದಿನದೂಡುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next