Advertisement

ಅರಂತೋಡು: ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆ

09:44 AM Jan 01, 2023 | Team Udayavani |

ಅರಂತೋಡು: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

Advertisement

ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಅಜ್ಜಾವರ ಮಂಡೆಕೋಲು ತೆರಳುವ ಮಾರ್ಗಮಧ್ಯೆ ಪಡ್ಡಂಬೈಲ್ ಕ್ರಾಸ್ ಎಂಬಲ್ಲಿಗೆ ತೆರಳಿ ಸೊಳ್ಳೆಗೆ ಹೊಡೆಯುವ ಕೀಟನಾಶಕ ಸೇವಿಸಿದ್ದು, ಮನೆಯ ಅಂಗಳ ತಲುಪುತ್ತಿದ್ದಂತೆ ಅವರು ವಾಂತಿ ಮಾಡಿದಾಗ ವಿಷ ಸೇವಿಸಿದ ವಿಚಾರ ಬಹಿರಂಗವಾಯಿತು.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆತ್ಮಹತ್ಯೆಗೆ ಅರ್ಥಿಕ ಸಮಸ್ಯಯೆ ಕಾರಣ ಎಂದು ಹೇಳಗಾಗುತ್ತಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next