Advertisement
ದುಗಲಡ್ಕದ ಮೂರು ಯುವಕರು ಪೆರಾಜೆಯಲ್ಲಿ ಅಡಿಕೆ ಮರ ಕಡಿಯುವ ಕೆಲಸ ಮಾಡಿ ಮನೆಗೆ ತೆರಳಲು ಇಬ್ಬರು ಬೈಕಿನಲ್ಲಿ ತೆರಳಿದರೆ, ಇನ್ನೋರ್ವ ಬಸ್ಸಿಗಾಗಿ ಕಾಯುತ್ತಿದ್ದ ಈ ಸಂದರ್ಭ ಎದುರಿನಿಂದ ಬಂದ ಪಿಕಪ್ ವಾಹನ ಬೈಕಿಗೆ ಡಿಕ್ಕಿ ಹೊಡೆದು ಬಳಿಕ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬ್ಯಾರಿಕೇಡ್ ಪಕ್ಕದಲ್ಲಿ ನಿಂತು ಬಸ್ಸು ಕಾಯುತ್ತಿದ್ದ ಸಹಪಾಟಿಗೂ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯರು ಸುಳ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯುವ ವೇಳೆ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
Advertisement
ಅರಂತೋಡು : ಪಿಕಪ್ ಡಿಕ್ಕಿ ಹೊಡೆದು ಓರ್ವ ಸಾವು, ಇಬ್ಬರು ಗಂಭೀರ
12:42 AM Mar 11, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.