Advertisement

Aranthodu: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

11:24 PM Jul 18, 2024 | Team Udayavani |

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹತ್ತು ಅಡಿ ಆಳದ ಗುಂಡಿಗೆ ಬಿದ್ದ ಘಟನೆ ಪೆರಾಜೆ ಗ್ರಾಮದ ದಾಸರಹಿತ್ಲಿನಲ್ಲಿ ಜು.18ರಂದು ಬೆಳಗ್ಗೆ ಸಂಭವಿಸಿದೆ.

Advertisement

ಕಾಸರಗೋಡಿನಿಂದ ಮಡಿಕೇರಿಗೆ ಮದುವೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಕಾಸರಗೋಡು ಮೂಲದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲ್ಲುಗುಂಡಿ : ಸ್ಕೂಟಿಗೆ ಕಾರು ಢಿಕ್ಕಿ
ಅರಂತೋಡು: ಸ್ಕೂಟಿಯೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಕಾರನ್ನು ಕೊಡಗು ಸಂಪಾಜೆ ಅರಣ್ಯ ತಪಾಸಣೆ ಚೆಕ್‌ಪೋಸ್ಟ್‌ ಬಳಿ ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದರು.

ಸಂಪಾಜೆ ಗ್ರಾಮದ ಚಟ್ಟೆಕಲ್ಲು ನಿವಾಸಿ ಮಾಧವ ಬಂಟೋಡಿ ಅವರ ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ತತ್‌ಕ್ಷಣ ಕಲ್ಲುಗುಂಡಿಯ ಯುವಕರು ಕೊಡಗು ಸಂಪಾಜೆ ಪೊಲೀಸ್‌ ಉಪಠಾಣೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next