Advertisement

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

11:02 AM Oct 18, 2024 | Team Udayavani |

ಅರಂತೋಡು: ಇಲ್ಲಿನ ಸಮೀಪದ ಅರಮನೆಗಯ ಶಿಥಿಲಗೊಂಡ ತೂಗು  ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ಅ.17ರ ಗುರುವಾರ ರಾತ್ರಿ ವರದಿಯಾಗಿದೆ.

Advertisement

ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾರ್ ಅವರು ಮನೆಗೆ ಬರುತ್ತಿದ್ದಾಗ ತೂಗು ಸೇತುವೆಯ ರೋಪ್ ತುಂಡಾಗಿ ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು.

ಈ ಪರಿಣಾಮವಾಗಿ ಕುಸುಮಾಧರ ಉಳುವಾರು ಅವರ ಕೈಗೆ ಗಂಭೀರ ಗಾಯವಾಗಿದೆ. ತೇಜುಮಾರ್ ಅವರು ರೋಪ್ ನಲ್ಲಿ ನೇತಾಡಿಕೊಂಡು ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಚಂದ್ರಶೇಖರ ಅವರು ಕೂಡಾ ಗಾಯಗೊಂಡಿದ್ದಾರೆ.

ಮೂವರು ಸುಳ್ಯದ ಮೆಡಿಕಲ್ ಕಾಲೇಜೊಂದರಲ್ಲಿ ದಾಖಲಾಗಿದ್ದಾರೆ. ಅರಮನೆಗಯ ಸೇತುವೆ ಶಿಥಿಲಗೊಂಡಿರುವ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಹಲವು ಬಾರಿ ವರದಿ ಪ್ರಕಟವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next