Advertisement

Aranthodu: ವಾಹನ ತಡೆದು ಹಲ್ಲೆ; ಆರೋಪ

09:22 PM Feb 26, 2024 | Team Udayavani |

ಅರಂತೋಡು: ಕಾಸರಗೋಡಿನಿಂದ ಮಡಿಕೇರಿಗೆ ಹೋಗುತ್ತಿದ್ದ ಇನೋವಾ ಕಾರನ್ನು ಅರಂತೋಡು ಬಳಿ ಜೀಪಿನಲ್ಲಿ ಬಂದ ಯುವಕರು ಅಡ್ಡಗಟ್ಟಿ ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

Advertisement

ಅರಂತೋಡು ಕೆಳಗಿನ ಪೇಟೆ ಬಳಿ ಘಟನೆ ನಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿ ಇನ್ನಿತರರಿಗೆ ಗಾಯಗಳಾಗಿದ್ದು, ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಪ್ರಕರಣ ಸುಳ್ಯ ಠಾಣೆಯ ಮೆಟ್ಟಿಲೇರಿದ್ದು ಇತ್ತಂಡದವರನ್ನು ಠಾಣೆಗೆ ಕರೆಸಿದ ಪೊಲೀಸರು ಮಾಹಿತಿ ಪಡೆದುಕೊಂಡು ಪರಸ್ಪರ ಮಾತುಕತೆಯ ಮೂಲಕ ರಾಜಿಯಲ್ಲಿ ಇತ್ಯರ್ಥಪಡಿಸಿ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next