Advertisement

ಅರಸಿನಮಕ್ಕಿ: ಗುಂಡೇಟಿಗೆ ಸಾಕು ಎಮ್ಮೆ ಬಲಿ

04:58 PM Sep 07, 2021 | Team Udayavani |

ಅರಸಿನಮಕ್ಕಿ : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ.

Advertisement

ಇದನ್ನೂ ಓದಿ : ಪಾಕ್ ವಿರುದ್ಧ ಘೋಷಣೆ ಕೂಗುತ್ತಾ ಬೀದಿಗಿಳಿದ ಅಫ್ಘಾನ್ ಮಹಿಳೆಯರು: ಗುಂಡು ಹಾರಿಸಿದ ತಾಲಿಬಾನ್

ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು ಕಂಡುಬಂದಿದ್ದು ಬೇಟೆಗಾರರ ಗುಂಡೇಟಿಗೆ  ಬಲಿಯಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಜತೆ  ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ :  ಮುಫ್ತಿ ಗೃಹಬಂಧನ : ಜ & ಕಾ ದ ವಸ್ತು ಸ್ಥಿತಿ ಏನೆಂಬುವುದು ಬಯಲಾಗಿದೆ : ಮಾಜಿ ಸಿಎಂ ಗರಂ

Advertisement
Advertisement

Udayavani is now on Telegram. Click here to join our channel and stay updated with the latest news.

Next