Advertisement

ಶಿಕ್ಷಣತಜ್ಞ ಪ್ರೊ.ಮಳಲಿ ವಸಂತಕುಮಾರ್ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ

10:40 PM Mar 18, 2021 | Team Udayavani |

ಬೆಂಗಳೂರು: ಕನ್ನಡದ ಹಿರಿಯ ಕವಿ, ವಿಮರ್ಶಕ , ಶಿಕ್ಷಣತಜ್ಞ ಪ್ರೊ.ಮಳಲಿ ವಸಂತಕುಮಾರ್ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Advertisement

ಮಳಲಿ ವಸಂತಕುಮಾರ್ ಅವರು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಕೊಟ್ಟವರು, ಕುವೆಂಪು ಹಾಗೂ ಕನಕದಾಸರ ಬಗ್ಗೆ ಅವರು ರಚಿಸಿದ ಕೃತಿ ಸಾಹಿತ್ಯಾಸಕ್ತರ ವಿಶೇಷ ಗಮನ ಸೆಳೆದಿದೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿರುವ ಮಳಲಿ ವಸಂತಕುಮಾರ್,ನೆಲ-ಜಲ ,ಭಾಷೆ ಮತ್ತು ಸಂಸ್ಕೃತಿಯ ಪ್ರಶ್ನೆ ಬಂದಾಗ ದಿಟ್ಟವಾಗಿ ನಿಂತು ಹೋರಾಟ ಮಾಡಿದವರು.

ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿ ಅವರು ಅಪಾರ ಶಿಷ್ಯ ಸಂಪತ್ತನ್ನು ಹೊಂದಿದ್ದರು, ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಕೊಡುಗೆ ನಿಜಕ್ಕೂ ಗಮನಾರ್ಹ. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಸ್ಪೂರ್ತಿಯ ಸೆಲೆಯೊಂದನ್ನು ಕಳೆದುಕೊಂಡಂತಾಗಿದೆ, ಎಂದು ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next