Advertisement

25 ವರ್ಷದ ನಂತರ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ ಅಣ್ಣಾವ್ರ ಜೊತೆ ನಟಿಸಿದ್ದ ಈ ನಟಿ

07:22 PM Aug 19, 2021 | Team Udayavani |

ಬೆಂಗಳೂರು: ವರನಟ ಡಾ. ರಾಜಕುಮಾರ್ ಅವರ ನಟನೆ ಹಾಗೂ ಶಂಕರ್ ನಾಗ ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಒಂದು ಮುತ್ತಿನ ಕಥೆ’ ಚಿತ್ರದಲ್ಲಿ ನಟಿಸಿದ್ದ ಕೃಷ್ಣ ಸುಂದರಿ ಅರ್ಚನಾ, ಇದೀಗ 25 ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

Advertisement

ಸ್ಯಾಂಡಲ್ವುಡ್ ನ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಆ್ಯಕ್ಷನ್ ಕಟ್ ಹೇಳಲಿರುವ ಕಾಂತಾರ ಚಿತ್ರದ ಮೂಲಕ ಅರ್ಚನಾ ಅವರು ಚಂದನವನದತ್ತ ಮತ್ತೆ ಮುಖಮಾಡಿದ್ದಾರೆ. 1996ರಲ್ಲಿ ತೆರೆ ಕಂಡಿದ್ದ ‘ಹುಲಿಯಾ’ ಇವರು ನಟಿಸಿದ್ದ ಕೊನೆಯ ಕನ್ನಡ ಚಿತ್ರವಾಗಿತ್ತು. ಇದೀಗ ಕಾಂತಾರದಲ್ಲಿ ನಟಿಸಿದ್ದು, ಚಿತ್ರತಂಡದಿಂದ ಅಧಿಕೃತ ಘೋಷಣೆಯೊಂದು ಬಾಕಿ ಇದೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಬೆಂಗಾಳಿ ಹಾಗೂ ಹಿಂದಿಯಲ್ಲೂ ನಟಿಸಿ ಯಶಸ್ಸು ಕಂಡಿದ್ದ   ಅರ್ಚನಾ ಅವರು ಕಾಂತಾರ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇನ್ನು 1984ರಲ್ಲಿ ಬಿಡುಗಡೆಯಾದ ‘ಪ್ರೇಮಿಗಳ ಸವಾಲ್’ ಅರ್ಚನಾ ನಟಿಸಿದ ಮೊದಲ ಕನ್ನಡ ಸಿನಿಮಾ. 1986ರಲ್ಲಿ ‘ಬೆಳ್ಳಿನಾಗ’, 1986ರಲ್ಲಿ ‘ಗುರಿ’, 1987ರಲ್ಲಿ ‘ಒಂದು ಮುತ್ತಿನ ಕಥೆ’ ಹಾಗೂ 1996ರಲ್ಲಿ ‘ಹುಲಿಯಾ’ ಚಿತ್ರಗಳಲ್ಲಿ ಅರ್ಚನಾ ಅಭಿನಯಿಸಿದ್ದಾರೆ. 1980ರಲ್ಲಿ ‘ತಾಯಿ ಪೊಂಗಲ್’ ಚಿತ್ರದ ಮೂಲಕ ಸಿನಿಮಾ ಜರ್ನಿ ಆರಂಭಿಸಿದ ಅರ್ಚನಾ, ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. 1987ರಲ್ಲಿ ತೆರೆಕಂಡ ತಮಿಳಿನ ‘ವೀಡು’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. 1988ರಲ್ಲಿ ತೆಲುಗಿನ ‘ದಾಸಿ’ ಚಿತ್ರದ ನಟನೆಗಾಗಿ ಎರಡನೇ ಬಾರಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next