Advertisement

ಸಿದ್ಧರಾಮಯ್ಯ ದ್ರಾವಿಡರೇ ಆರ್ಯರೇ : ಸಿಎಂ ಬೊಮ್ಮಾಯಿ ಸವಾಲು

11:44 PM May 28, 2022 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ತಮ್ಮ ಮೂಲವನ್ನು ಹೇಳಲಿ ಎಂದು ಹೇಳಿದರು.

ನೆಹರೂ ಅವರಿಗೆ ಮೋದಿಯನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಯಾಕೆಂದರೆ ಚೀನವು ಭಾರತದ ಗಡಿ ಯನ್ನು ಆಕ್ರಮಿಸಿದಾಗ ಯಾವುದೇ ಕ್ರಮ ತೆಗೆದುಕೊಳ್ಳದ ನೆಹರೂ ಗಡಿಭಾಗವನ್ನು ಬಿಟ್ಟುಕೊಟ್ಟರು. ಆದರೆ ನರೇಂದ್ರ ಮೋದಿಯವರು ಚೀನದ ಆಕ್ರಮಣದಿಂದ ನಮ್ಮ ಗಡಿಯನ್ನು ರಕ್ಷಿಸಿಕೊಂಡವರು.

ಪಾಕಿಸ್ಥಾನದ ಜತೆಗೆ ರಾಜಿ ಮಾಡಿಕೊಳ್ಳದೆ ದೇಶದ ಅಖಂಡತೆ ಹಾಗೂ ಏಕತೆಯನ್ನು ಮೆರೆದಿದ್ದಾರೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next