Advertisement

ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಬಲಿ

07:23 PM May 03, 2021 | Team Udayavani |

ಬೆಂಗಳೂರು : ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಮೃತಪಟ್ಟಿದ್ದಾರೆ.

Advertisement

ಕೆಲ ದಿನಗಳ ಹಿಂದೆ ಕಿರಣ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕಿಗೆ  ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಈ ಕುರಿತು ಸ್ವತಃ ಅರ್ಜುನ್ ಜನ್ಯ ಅವರು ತಮ್ಮ  ಇನ್ಸ್ಟಾಗ್ರಾಮ್ ಖಾತೆಯಲ್ಲಿ ದುಃಖದ ವಿಚಾರವನ್ನು ಸಹೋದರನ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

“ಕೋವಿಡ್ ಸೋಂಕಿನಿಂದಾಗಿ ನನ್ನ ಪ್ರೀತಿಯ ಸಹೋದರನನ್ನು ಕಳೆದುಕೊಂಡೆ. ಕಿರಣ್, ನೀನಿಲ್ಲದ ನನ್ನ ನೋವನ್ನು ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನಾನು ಉಸಿರಾಡುವವರೆಗೂ ನೀನು ನನ್ನ ಉಸಿರಾಟದಲ್ಲಿರುತ್ತೀಯ’’ ಎಂದು ಬರೆದುಕೊಂಡಿದ್ದಾರೆ.

ಕೋವಿಡ್ ಸೋಂಕು ಬಡವ ಶ್ರೀಮಂತರೆನ್ನದೆ ಎಲ್ಲರನ್ನೂ ತನ್ನ ಸುಳಿಯಲ್ಲಿ ಸಿಲುಕಿಸಿ ಸಾವಿನ ಕೂಪಕ್ಕೆ ದೂಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ನಿರ್ಮಾಪಕರಾದ ರಾಜಶೇಖರ್, ಚಂದ್ರಶೇಖರ್ ಅವರೂ ಕೋವಿಡ್ ಸೋಂಕಿನ ಕಾರಣದಿಂದ ಕೊನೆಯುಸಿರೆಳೆದಿದ್ದರು.

Advertisement

 

 

Advertisement

Udayavani is now on Telegram. Click here to join our channel and stay updated with the latest news.

Next