Advertisement

ಐಪಿಎಲ್ ನಿಂದ ಹೊರಬಿದ್ದ ಅರ್ಜುನ್ ತೆಂಡೂಲ್ಕರ್: ಮುಂಬೈಗೆ ಬದಲಿ ಆಟಗಾರನ ಸೇರ್ಪಡೆ

11:33 AM Sep 30, 2021 | Team Udayavani |

ದುಬೈ: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಹಂತ ತಲುಪುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಲೀಗ್ ಹಂತ ಮುಕ್ತಾಯವಾಗುತ್ತಿದೆ. ಆದರೆ ಐಪಿಎಲ್ ನಲ್ಲಿ ಗಾಯಾಳುಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಕೆಲ ದಿನಗಳ ಹಿಂದೆ ಕುಲದೀಪ್ ಯಾದವ್ ಗಾಯಗೊಂಡು ಭಾರತಕ್ಕೆ ವಾಪಾಸಾಗಿದ್ದರೆ, ಇದೀಗ ಅರ್ಜುನ್ ತೆಂಡೂಲ್ಕರ್ ಕೂಡಾ ಗಾಯಗೊಂಡಿದ್ದಾರೆ.

Advertisement

ಮುಂಬೈ ಇಂಡಿಯನ್ಸ್ ತಂಡ ಬುಧವಾರ ಈ ಬಗ್ಗೆ ಘೋಷಣೆ ಮಾಡಿದೆ. ಅರ್ಜುನ್ ತೆಂಡೂಲ್ಕರ್ ಗಾಯಗೊಂಡಿರುವ ಕಾರಣ ಅವರು ಐಪಿಎಲ್ ನಿಂದ ಹೊರಬಿದ್ದಿದ್ದಾರೆ. ಅವರ ಬದಲು ದೆಹಲಿ ಮೂಲದ ವೇಗಿ ಸಿಮರ್ಜೀತ್ ಸಿಂಗ್ ಮುಂಬೈ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ಮತ್ತೆ ಒಡಕು: ಕೊಹ್ಲಿ ವಿರುದ್ಧ ದೂರು ನೀಡಿದ ಮತ್ತಿಬ್ಬರು ಆಟಗಾರರು

ಬಲಗೈ ವೇಗಿಯಾಗಿರುವ ಸಿಮರ್ಜೀತ್ ಸಿಂಗ್ ಅವರು ಕಡ್ಡಾಯ ಕ್ವಾರಂಟೈನ್ ಮುಗಿಸಿ ತಂಡವನ್ನು ಕೂಡಿಕೊಂಡಿದ್ದಾರೆ. ಅವರು ತಂಡದೊಂದಿಗೆ ಅಭ್ಯಾಸ ನಡೆಸುತ್ತಿದ್ದಾರೆ ಎಂದು ತಂಡದ ಪ್ರಕಟಣೆ ತಿಳಿಸಿದೆ.

Advertisement

ಎಡಗೈ ವೇಗಿಯಾಗಿರುವ ಅರ್ಜುನ್ ತೆಂಡೂಲ್ಕರ್ ರನ್ನು ಮುಂಬೈ ಇಂಡಿಯನ್ಸ್ ತಂಡ 20 ಲಕ್ಷ ರೂ. ಗೆ ಖರೀದಿ ಮಾಡಿತ್ತು. ಆದರೆ ಅವರು ಒಂದೇ ಒಂದು ಪಂದ್ಯವಾಡುವ ಅವಕಾಶ ಇದುವರೆಗೆ ಪಡೆದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next