Advertisement
ದಸರಾ ಹಿನ್ನೆಲೆಯಲ್ಲಿ ಕಾಡಿನಿಂದ ನಾಡಿಗೆ ಬಂದು ಕಳೆದ ಒಂದೂವರೆ ತಿಂಗಳಿನಿಂದ ಸತತ ತಾಲೀಮಿನಲ್ಲಿ ತೊಡಗಿಕೊಂಡಿದ್ದ ಆನೆಗಳು ಎಲ್ಲರ ಪ್ರಮುಖ ಆಕರ್ಷಣೆಯಾಗಿದ್ದವು. ಇನ್ನೂ ಜಂಬೂಸವಾರಿ ಮೆರವಣಿಗೆಯಲ್ಲಿ ಯಶಸ್ವಿಯಾಗಿ ಪಾಲ್ಗೊಳ್ಳುವ ಮೂಲಕ ಲಕ್ಷಾಂತರ ನೋಡುಗರ ಮೆಚ್ಚುಗೆಗೆ ಪಾತ್ರವಾರುವ ಗಜಪಡೆ ದಿನವಿಡಿ ವಿಶ್ರಾಂತಿ ಪಡೆದವು.
Related Articles
Advertisement
ಇಂದು ನಾಡಿನಿಂದ ಕಾಡಿಗೆ: ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದು ಕಳೆದ ಒಂದೂವರೆ ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದ ಆನೆಗಳು ಇಂದು ಕಾಡಿನತ್ತ ಪ್ರಯಾಣ ಬೆಳೆಸಲಿವೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳು ವಿವಿಧ ಆನೆ ಶಿಬಿರಗಳಿಂದ 12 ಆನೆಗಳು ಆಗಮಿಸಿದ್ದವು.
ಈ ಎಲ್ಲಾ ಆನೆಗಳು ಭಾನುವಾರ ಬೆಳಗ್ಗೆ 9.30ಕ್ಕೆ ಅರಮನೆಯಿಂದ ತಮ್ಮ ತಮ್ಮ ಶಿಬಿರಗಳಿಗೆ ಲಾರಿಗಳಲ್ಲಿ ಪ್ರಯಾಣ ಬೆಳೆಸಲಿವೆ. ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಆನೆಗಳಿಗೆ ಹಾಗೂ ಅವುಗಳ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ನೀಡಲಾಗುವುದು.
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಎರಡನೇ ಬಾರಿ ನಾನು ಅರ್ಜುನನಿಗೆ ಸಾರಥಿಯಾಗಿ ಅಂಬಾರಿ ಮುನ್ನಡೆಸಿದ್ದು ತುಂಬಾ ಖುಷಿಯಾಗಿದೆ. ಅಂಬಾರಿ ನಡೆಸುವ ವೇಳೆ ಯಾವುದೇ ತೊಂದರೆಯಾಗಿಲ್ಲ. ನಿಗದಿತ ಸಮಯಕ್ಕೆ ನಾವು ಗುರಿ ತಲುಪಿದ್ದೇವೆ. ಅಂಬಾರಿ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ.-ವಿನು, ಅರ್ಜುನನ ಮಾವುತ