Advertisement

Arjuna Elephant ಮೃತ್ಯು; ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

01:24 PM Dec 06, 2023 | Team Udayavani |

ಚಿಕ್ಕಮಗಳೂರು: ಹಾಸನ‌ ಜಿಲ್ಲೆಯ ಸಕಲೇಶಪುರದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಕಾಡಾನೆ ದಾಳಿಗೆ ಮೃತಪಟ್ಟ ಹಿನ್ನಲೆ ಜಿಲ್ಲೆಯ ಮೂಡಿಗೆರೆ ತಾಲೂಕು ಭಾಗದಲ್ಲಿ ನಡೆಯುತ್ತಿದ್ದ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Advertisement

ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದ್ದರಿಂದ ಮಾವುತರು ಮತ್ತು ಕಾವಡಿಗರು, ಸಿಬ್ಬಂದಿಗಳು ದುಃಖ, ಆತಂಕದಲ್ಲಿದ್ದಾರೆ.

ಅರ್ಜುನ ಆನೆ ಮೃತಪಟ್ಟ ಹಿನ್ನಲೆ ಮೂಡಿಗೆರೆ ತಾಲೂಕು ಬೈರಾಪುರ ಬಳಿ ನಡೆಯುತ್ತಿದ್ದ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ದಸರಾ ಗಜಪಡೆಯಾದ ಮಹೇಂದ್ರ, ಗಜೇಂದ್ರ ಸೇರಿದಂತೆ ಆರು ಆನೆಗಳನ್ನು ಬಳಸಿಕೊಂಡು ಆನೆ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಸೆರೆ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಆರು ಆನೆಗಳು ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next