Advertisement

Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್‌ಗೆ ರೆಡಿ: ಸಚಿವ ಖಂಡ್ರೆ

10:53 PM Jul 06, 2024 | Team Udayavani |

ಸಕಲೇಶಪುರ: ಕಾಡಾನೆ ಜತೆಗಿನ ಕಾದಾಟದಲ್ಲಿ ಮೃತಪಟ್ಟಿದ್ದ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕ ಕಾಮಗಾರಿ 50 ಲಕ್ಷ ರೂ. ವೆಚ್ಚದಲ್ಲಿ ಆರಂಭವಾಗಲಿದ್ದು, ಡಿಸೆಂಬರ್‌ನಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

Advertisement

ಅರ್ಜುನ ಆನೆ ಮೃತಪಟ್ಟಿದ್ದ ಸಕಲೇಶಪುರ ತಾಲೂಕು ದಬ್ಬಳಿಕಟ್ಟೆ ಅರಣ್ಯ ಪ್ರದೇಶದಲ್ಲಿ ಶನಿವಾರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಅರ್ಜುನ ಮೃತಪಟ್ಟು 2024ರ ಡಿಸೆಂಬರ್‌ಗೆ ಒಂದು ವರ್ಷವಾಗಲಿದ್ದು, ಪ್ರಥಮ ಪುಣ್ಯಸ್ಮರಣೆಯ ದಿನದಂದೇ ಸ್ಮಾರಕ ಉದ್ಘಾಟನೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next