Advertisement

ಅರ್ಕಾವತಿ ಡಿನೋಟಿಫಿಕೇಷನ್‌: ಸಿಎಂ ವಿರುದ್ಧ ಎಸಿಬಿಗೆ ದೂರು

11:32 AM May 19, 2017 | |

ಬೆಂಗಳೂರು: ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈ ಹಿಂದೆ ಬಿಡಿಎ ಆಯುಕ್ತರಾಗಿದ್ದ ಶ್ಯಾಮ್‌ಭಟ್‌ ಅಧಿಕಾರ ದುರಪಯೋಗ ಪಡಿಸಿಕೊಂಡು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವಕೀಲ ಅಮೃತೇಶ್‌ ಗುರುವಾರ ದೂರು ದಾಖಲಿಸಿದ್ದಾರೆ.

Advertisement

ಅರ್ಕಾವತಿ ಬಡಾವಣೆಯ ಸರ್ವೆ ನಂ.93ರಲ್ಲಿ 3ಎಕರೆ 10 ಗುಂಟೆ ಸರ್ಕಾರಿ ಭೂಮಿಯಾಗಿದ್ದು, ಯಾವುದೇ ಸೂಕ್ತ ದಾಖಲೆಗಳು, ಅರ್ಜಿಗಳಿಲ್ಲದೇ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ, ಶ್ಯಾಮ್‌ಭಟ್‌ ಕಾನೂನು ಉಲ್ಲಂ ಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರಿದ್ದಾರೆ. ನಿಯಮಾವಳಿ ಪ್ರಕಾರ ಸರ್ಕಾರಿ ಭೂಮಿಯನ್ನು ಡಿನೋಟಿಫೈ ಮಾಡಲು ಬರುವುದಿಲ್ಲ.

ಈ ಬಗ್ಗೆ ಬಿಡಿಎ ಅಧಿಕಾರಿಯೊಬ್ಬರು ಕಡತದಲ್ಲಿ ಉಲ್ಲೇಖ ಮಾಡಿ ಈ ಜಮೀನನ್ನು ಡಿನೋಟಿಫೈ ಮಾಡುವುದು ಸರಿ­ಯಲ್ಲ ಎಂದು ಹೇಳಿದ್ದರು. ಆದರೂ ಕೆಲ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ­ದಿಂದ ಅಧಿಕಾರ ದುರುಪಯೋಗ ಪಡಿಸಿಕೊಂಡಿ­ರು­ವುದು ಸರಿಯಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next