Advertisement

ಕುಪ್ವಾರದಲ್ಲಿ ಉಗ್ರರ ಅಟ್ಟಹಾಸ:ಆತ್ಮಾಹುತಿ ದಾಳಿಗೆ 3 ಯೋಧರು ಹುತಾತ್ಮ

09:10 AM Apr 27, 2017 | Team Udayavani |

 ಶ್ರೀನಗರ : ಇಲ್ಲಿನ ಕುಪ್ವಾರ ದ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಪಂಝ್ಗಾಮ್‌ ಸೇನಾ ಶಿಬಿರದ ಮೇಲೆ ಗುರುವಾರ ನಸುಕಿನ 4.30 ರ ವೇಳೆಗೆ  ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು  ಸೇನಾ ಕ್ಯಾಪ್ಟನ್‌ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

Advertisement

ಇಬ್ಬರು ಉಗ್ರರು ತಮ್ಮನ್ನು ತಾವು ಸ್ಫೋಟಿಸಿಕೊಂಡ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ತಕ್ಷಣ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿ ಸ್ಥಳದಲ್ಲಿದ್ದ ಇಬ್ಬರು ಉಗ್ರರನ್ನು ಹತ್ಯೆಗೈದಿವೆ.

ಸ್ಥಳದಲ್ಲಿ ಸೇನಾ ಪಡೆಗಳು ಕೂಂಬಿಂಗ್‌ ಕಾರ್ಯಾಚರಣೆ ನಡೆಸುತ್ತಿದ್ದು , ಇನ್ನಷ್ಟು ಫಿದಾಯಿನ್‌ಗಳಿರುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿದೆ.

ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ಅವರು ಸೇನಾ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿ ಗೊಳಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next