Advertisement

ಜಮ್ಮು-ಕಾಶ್ಮೀರ: ಉಗ್ರರ ದಾಳಿಗೆ ಸೇನಾ ಅಧಿಕಾರಿ ಸೇರಿ ಐವರು ಯೋಧರು ಹುತಾತ್ಮ

01:39 PM Oct 11, 2021 | Team Udayavani |

ನವದೆಹಲಿ:ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್ ನ ಪೀರ್ ಪಂಜಾಲ್ ವಲಯದ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಸೈನಿಕರು ಹಾಗೂ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿರುವ ಘಟನೆ ಸೋಮವಾರ (ಅಕ್ಟೋಬರ್ 11) ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಪೋಕ್ಸೋ ಅಡಿ 3 ಮಕ್ಕಳ ತಂದೆ ಅರೆಸ್ಟ್: ವಿದ್ಯಾರ್ಥಿನಿಗೆ ಬೆದರಿಸಿ, ಅಪಹರಿಸಿ ಅತ್ಯಾಚಾರ ಆರೋಪ

ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ವೇಳೆ ನಡೆದ ಪ್ರತಿದಾಳಿಯಲ್ಲಿ ಸೈನಿಕರು ಹುತಾತ್ಮರಾದ ಘಟನೆ ಬಗ್ಗೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿ ಹೇಳಿದೆ. ಇದಕ್ಕೂ ಮುನ್ನ ಅನಂತ್ ನಾಗ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದರು.

ಸಾವನ್ನಪ್ಪಿರುವ ಉಗ್ರರನ್ನು ಲಷ್ಕರ್ ಎ ತೊಯ್ಬಾದ ಜತೆ ನಂಟು ಹೊಂದಿದ್ದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಈತ ಕಣಿವೆ ಪ್ರದೇಶದಲ್ಲಿ ನಾಗರಿಕರನ್ನು ಹತ್ಯೆಗೈದ ಘಟನೆಯಲ್ಲಿ ಶಾಮೀಲಾಗಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

ಅನಂತ್ ನಾಗ್ ಜಿಲ್ಲೆಯ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಯೋಧರು ಪ್ರತಿದಾಳಿ ನಡೆಸಿದಾಗ ಉಗ್ರ ಸಾವನ್ನಪ್ಪಿದ್ದ. ಆತನ ಬಳಿ ಇದ್ದ ಪಿಸ್ತೂಲ್, ಗ್ರೆನೇಡ್ ವಶಕ್ಕೆ ತೆಗೆದುಕೊಂಡಿರುವುದಾಗಿ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next